ಬಸವಭಕ್ತಿ

ಅಂಗನವಾಡಿ ಕೇಂದ್ರಗಳಿಗೆ ಜಿ.ಪಂ ಸಿಇಒ ಭೇಟಿ

ಯಾದಗಿರಿಃ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕವಿತಾ ಎಸ್.ಮನ್ನಿಕೇರಿ ಅವರು ಬಳಿಚಕ್ರ ವಲಯ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿ, ದಾಖಲಾತಿಗಳನ್ನು ಪರೀಶಿಲಿಸಿದರು.

ಅರಕೇರಾ ಕೆ. ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ-1ರ ಮಕ್ಕಳೊಂದಿಗೆ ಶಾಲಾ ಪೂರ್ವ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಜೊತೆಗೆ ಮಾತೃಪೂರ್ಣ ಯೋಜನೆಯ ಫಲಾನುಭವಿಗಳಾದ ಗರ್ಭಿಣಿ ಮತ್ತು ಬಾಣಂತಿಯರೊಂದಿಗೆ ಆಹಾರವನ್ನು ಸೇವಿಸಿದರು.

ನಂತರ ಮುಂಡರಗಿ ಗ್ರಾಮದ ಅಂಗನವಾಡಿ ಕೇಂದ್ರ-1ಕ್ಕೆ ಭೇಟಿ ನೀಡಿ, ಮಕ್ಕಳ ಹಾಜರಾತಿ ಪುಸ್ತಕವನ್ನು ವೀಕ್ಷಣೆ ಮಾಡಿದರು. ಎರಡು ದಿನಗಳಿಂದ ಹಾಜರಾತಿ ಹಾಕದೇ ಇರುವುದು ಕಂಡುಬಂದಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ನೋಟಿಸ್ ಜಾರಿ ಮಾಡಲು ಅವರು ನಿರ್ದೇಶಿಸಿದರು.

ಅಂಗನವಾಡಿ ಕೇಂದ್ರದ ಸುತ್ತ-ಮುತ್ತ ಕಂಪೌಂಡ್ ಇರುವುದರಿಂದ ಕಿಚನ್ ಗಾರ್ಡನ್ ಮಾಡಲು ಆದೇಶಿಸಿದರು. ಅಲ್ಲದೇ, ಶೌಚಾಲಯ ಉಪಯೋಗ ಮಾಡಬೇಕೆಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀಕಾಂತ ಕುಲಕರ್ಣಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜಿ.ಮಣ್ಣೂರ ಮತ್ತು ವಲಯ ಮೇಲ್ವಿಚಾರಕಿ ಉಪಸ್ಥಿತರಿದ್ದರು.

 

Related Articles

Leave a Reply

Your email address will not be published. Required fields are marked *

Back to top button