ಪ್ರಮುಖ ಸುದ್ದಿ

ಧಾನ್ಯ ಖರೀದಿ ಕೇಂದ್ರ ಸ್ಥಾಪನೆಗೆ ಸರ್ಕಾರ ನಿರ್ಲಕ್ಷ್ಯ- ಶಾಸಕ ಖರ್ಗೆ ಆಕ್ರೋಶ

ಹೆಸರು ಉದ್ದು ಖರೀದಿ ಕೇಂದ್ರ ಸ್ಥಾಪನೆಗೆ ಸರ್ಕಾರ ನಿರ್ಲಕ್ಷ್ಯ- ಶಾಸಕ ಖರ್ಗೆ ಆಕ್ರೋಶ

ಕಲಬುರ್ಗಿಃ ಹೆಸರು ಹಾಗೂ ಉದ್ದು ಖರೀದಿ ಕೇಂದ್ರ ಸ್ಥಾಪನೆಗೆ ಸರಕಾರ ದಿವ್ಯ ನಿರ್ಲಕ್ಷ್ಯ ವಹಿಸುತ್ತಿದ್ದು , ರೈತರು ತಾವು ಬೆಳೆದ ಬೆಳೆಯನ್ನು ಕಡಿಮೆ ದರದಲ್ಲಿ ಮಾರಾಟ ಮಾಡಿ ನಷ್ಠ ಅನುಭವಿಸುತ್ತಿದ್ದಾರೆ. ನಿದ್ದೆಯಲ್ಲಿರುವ ಸರಕಾರ ನಮ್ಮ ಭಾಗದ ರೈತರ ಕಡೆ ಗಮನ ಹರಿಸಲಿ ಎಂದು ಶಾಸಕರಾದ ಶ್ರೀ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವಿಟ್ ಮಾಡಿರುವ ಶಾಸಕರು ಧಾನ್ಯಗಳ ನಾಡು ಕಲಬುರಗಿ ಯಲ್ಲಿ ಹೆಸರು ಹಾಗೂ ಉದ್ದು ಮಾರುಕಟ್ಟೆಗೆ ಬಂದಿವೆ. ಎಂ ಎಸ್ ಪಿ ದರದಲ್ಲಿ ಸದರಿ ಧಾನ್ಯ ಖರೀದಿಸಲು ರಾಜ್ಯ ಸರಕಾರ ಖರೀದಿ ಕೇಂದ್ರ ಸ್ಥಾಪಿಸದೆ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ. ಹಾಗಾಗಿ ರೈತರು ತಾವು ಬೆಳೆದ ಬೆಳೆಯನ್ನು ಕಡಿಮೆ ದರದಲ್ಲಿ ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದಾರೆ.

ಈ ಬಗ್ಗೆ ಎರಡು ಪತ್ರ ಬರೆದು ಸರಕಾರಕ್ಕೆ ಎಚ್ಚರಿಸಿದ್ದರೂ ಕೂಡಾ ನಿದ್ದೆಯಿಂದ ಎದ್ದಿಲ್ಲ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ತಿಂಗಳ ಹಿಂದೆ ಹೆಸರು ಕ್ವಿಂಟಾಲ್ ರೂ 9000 ದಂತೆ ಮಾರಾಟ ಮಾಡಲಾಗುತ್ತಿತ್ತು.

ಆದರೆ, ಈಗ ಧಾರಣೆ ರೂ 4-5 ಸಾವಿರಕ್ಕೆ ಕುಸಿದಿದೆ. ಜೊತೆಗೆ ಸರಕಾರವೂ ಕೂಡಾ ಈಗಾಗಲೇ ನಿರ್ಧರಿಸಿರುವಂತೆ ಪ್ರತಿಕ್ವಿಂಟಾಲ್ ಗೆ ರೂ 7196 ರಂತೆಯೂ ಖರೀದಿಸದ ಕಾರಣ ರೈತರು ಕಡಿಮೆ ಬೆಲೆಯಲ್ಲಿ ಹೆಸರು ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಒಂದು ಕಡೆ ಮಾರುಕಟ್ಟೆಯಲ್ಲಿ ದರ ಕುಸಿದಿದ್ದರೆ ಮತ್ತೊಂದು ಕಡೆ ನಿರಂತರ ಮಳೆ‌ ಸುರಿದ ಕಾರಣ ರೈತರು ಕಟಾವು ಮಾಡಲಾಗದ ಹೆಸರು ಜಮೀನಿನಲ್ಲಿಯೇ ಮೊಳೆಕೆಯೊಡೆಯುತ್ತಿದೆ.

ಹಿಂಗಾರು ಬಿತ್ತನೆ ಬೀಜ ಹಾಗೂ‌ ರಸಗೊಬ್ಬರ ಖರೀದಿ ಸೇರಿದಂತೆ ಇತರೆ ಖರ್ಚುಗಳಿಗೆ ಹಣ ಸರಿದೂಗಿಸಲು ಕಷ್ಟಪಡುತ್ತಿರುವ ರೈತರಿಗೆ ಸಾಲ ಮರುಪಾವತಿ ಮತ್ತೊಂದು ಸಂಕಷ್ಟ ತಂದೊಡ್ಡಿದೆ. ಇಂತಹ ಸಂದರ್ಭಗಳಲ್ಲಿ ರೈತರಿಗೆ ಸಹಾಯ ಮಾಡಬೇಕಿರುವ ಸರಕಾರ ನಿದ್ದೆಯಿಂದ ಎದ್ದಿಲ್ಲ. ಸಿಎಂ ಯಡಿಯೂರಪ್ಪನವರು ನಮ್ಮ ಭಾಗದ ರೈತರ ಕಡೆ ಗಮನ ಹರಿಸಬೇಕೆಂದು ಆಗ್ರಹಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button