Homeಅಂಕಣಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ
ಸುಲಿಗೆ ಪ್ರಕರಣ : ರಾಜ್ಯವೇ ಖುಷಿಪಡುವ ಸುದ್ದಿಕೊಟ್ಟಿದ್ದ ದಿವ್ಯಾ ವಸಂತಗೆ ಸಂಕಷ್ಟ!

ಬೆಂಗಳೂರು : ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂ. ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ಖಾಸಗಿ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜಿ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿಯ ಸಿಇಒ ರಾಜಾನುಕುಂಟೆ ವೆಂಕಟೇಶ್ ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್ ಬಂಧಿತರಾಗಿದ್ದು, ಆರೋಪಿಗಳಿಂದ 3 ಮೊಬೈಲ್ ಜಪ್ತಿ ಮಾಡಲಾಗಿದೆ.