Homeಜನಮನಪ್ರಮುಖ ಸುದ್ದಿವಿನಯ ವಿಶೇಷಸಂಸ್ಕೃತಿ

46 ವರ್ಷಗಳ ನಂತರ ತೆರೆದ ಪುರಿ ಜಗನ್ನಾಥನ ರತ್ನ ಭಂಡಾರ; ಭಕ್ತರಿಗೆ ಇಂದಿನಿಂದ ಪ್ರವೇಶ ಆರಂಭ

ಭುವನೇಶ್ವರಂ: ಒಡಿಶಾದ ಪುರಿ ಜಗನ್ನಾಥ ದೇಗುಲ(Puri Jagannath temple)ದ ರತ್ನ ಭಂಡಾರ(Ratna Bhandar)ದ ಕೋಣೆಗಖನ್ನು ಬರೋಬ್ಬರಿ 46 ವರ್ಷಗಳ ಬಳಿಕ ತೆರೆಯಲಾಗಿದ್ದು, ಆ ಮೂಲಕ ಹಲವು ವರ್ಷಗಳಿಂದ ಭಕ್ತರಲ್ಲಿ ಹಾಗೂ ದೇಗುಲದ ನಿಗೂಢ ಕೋಣೆಯಲ್ಲಿ ಅಡಗಿರುವ ಕುತೂಹಲಗಳಿಗೆ ತೆರೆ ಬೀಳಲಿವೆ. ಕೇರಳದ ಅನಂತ ಪದ್ಮನಾಭನ ಸಂಪತ್ತಿನ ರೀತಿಯಲ್ಲೇ ಪುರಿ ಜಗನ್ನಾಥ ದೇವಸ್ಥಾನದ ಸಂಪತ್ತು ಇದೆ ಎಂಬ ಮಾತಿದೆ. ಸೀಕ್ರೆಟ್ ಕೋಣೆಯಲ್ಲಿ ಸಾವಿರಾರು ಕೆಜಿ ಚಿನ್ನಾಭರಣ, ಮುತ್ತು, ರತ್ನ, ಹವಳ ಮತ್ತು ಬೆಳ್ಳಿ ಸಾಮಗ್ರಿಗಳಿವೆ ಎನ್ನಲಾಗಿದೆ.

ಮಧ್ಯಾಹ್ನ 1:28ರ ಶುಭ ಲಗ್ನದಲ್ಲಿ ರತ್ನ ಭಂಡಾರದ ಬಾಗಿಲು ತೆರೆಯಲಾಗಿದೆ. ಬಳಿಕ ಅಲ್ಲಿದ್ದ ವಿಶೇಷ ಬಾಕ್ಸ್‌ಗಳನ್ನು ದೇಗುಲಕ್ಕೆ ತರಲಾಯಿತು. ಅದರ ಪೂಜ್ಯ ಭಂಡಾರವನ್ನು ಪುನಃ ತೆರೆಯಲು ದೇವಾಲಯವನ್ನು ಪ್ರವೇಶಿಸಿದ 11 ಜನರಲ್ಲಿ ಒರಿಸ್ಸಾದ ಮಾಜಿ ಎಚ್‌ಸಿ ನ್ಯಾಯಾಧೀಶ ಬಿಸ್ವನಾಥ್ ರಾತ್, ಶ್ರೀ ಜಗನ್ನಾಥ ದೇವಾಲಯದ ಆಡಳಿತ (ಎಸ್‌ಜೆಟಿಎ) ಮುಖ್ಯ ಆಡಳಿತಾಧಿಕಾರಿ ಅರಬಿಂದ ಪಾಧಿ, ಎಎಸ್‌ಐ ಸೂಪರಿಂಟೆಂಡೆಂಟ್ ಡಿಬಿ ಗಡನಾಯಕ್ ಮತ್ತು ಪುರಿಯ ಪಟ್ಟದ ರಾಜ ಗಜಪತಿ ರಾಜನ ಪ್ರತಿನಿಧಿ ಸೇರಿದ್ದಾರೆ.

ಒರಿಸ್ಸಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಬಿಸ್ವನಾಥ್ ರಾತ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಈ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿದೆ. ಸರ್ಕಾರದ ಅನುಮೋದನೆಯನ್ನು ಪಡೆದ ನಂತರ, ದಾಸ್ತಾನುಗಳಿಗೆ ಮಾರ್ಗದರ್ಶನ ನೀಡಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು (SOP)ಸ್ಥಾಪಿಸಲಾಯಿತು. ಶ್ರೀ ಜಗನ್ನಾಥ ದೇವಸ್ಥಾನದ ಆಡಳಿತವು (SJTA), ಅದರ ಮುಖ್ಯ ಆಡಳಿತಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನೋಡಿಕೊಳ್ಳುತ್ತಿದೆ.

ಅನಂಗಭೀಮ ದೇವ ಕ್ರಿಶ 1238ರವರೆಗೆ ಒಡಿಶಾ ಪ್ರದೇಶದ ರಾಜನಾಗಿದ್ದ. ಈತನ ಅಧಿಕಾರದ ಅವಧಿಯಲ್ಲಿ ಪುರಿ ದೇವಾಲಯಕ್ಕೆ 1.25 ಲಕ್ಷ ತೊಲ ಚಿನ್ನವನ್ನು ದಾನವಾಗಿ ನೀಡಿದ್ದ ಎಂಬ ಇತಿಹಾಸ ಇದೆ. 1465ರಲ್ಲಿ ರಾಜ ಕಪಿಲೇಂದ್ರ ದೇವ್‌ ಕೂಡ ಸಾಕಷ್ಟು ಚಿನ್ನವನ್ನು ದಾನ ಮಾಡಿರುವ ಬಗ್ಗೆ ಉಲ್ಲೇಖ ಇದೆ.

Related Articles

Leave a Reply

Your email address will not be published. Required fields are marked *

Back to top button