Homeಪ್ರಮುಖ ಸುದ್ದಿಸಂಸ್ಕೃತಿ

‘ಪುರಿ ಜಗನ್ನಾಥ ರಥಯಾತ್ರೆ’ ವೇಳೆ ಕಾಲ್ತುಳಿತ: ಇಬ್ಬರು ಮೃತ್ಯು , 300 ಮಂದಿಗೆ ಗಾಯ

ಒಡಿಶಾದಲ್ಲಿ ಜಗನ್ನಾಥ ರಥಯಾತ್ರೆಯ ಸಂದರ್ಭದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300  ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಯಾತ್ರೆಯಲ್ಲಿ ಎರಡು ವಿಭಿನ್ನ ಘಟನೆಗಳಲ್ಲಿ ಸಾವುಗಳು ಸಂಭವಿಸಿವೆ.

ಭಾನುವಾರ ಪುರಿಯಲ್ಲಿ ರಥಯಾತ್ರೆಯ ಸಮಯದಲ್ಲಿ, ಬೋಲಾಂಗೀರ್ ಜಿಲ್ಲೆಯ ನಿವಾಸಿಯೊಬ್ಬರು ಕಾಲ್ತುಳಿತದಂತಹ ಪರಿಸ್ಥಿತಿಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ನಾವು ಆತನನ್ನ ಆಂಬ್ಯುಲೆನ್ಸ್ನಲ್ಲಿ ಇರಿಸಿದಾಗ, ಆತನ ನಾಡಿಮಿಡಿತ ಓಡುತ್ತಿತ್ತು. ಆಸ್ಪತ್ರೆಗೆ ಕರೆದೊಯ್ದು ಸಿಪಿಆರ್ ನೀಡಿದ್ದೇವೆ. ಆದ್ರೆ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಆಂಬ್ಯುಲೆನ್ಸ್ ಅಟೆಂಡೆಂಟ್ ಸುಶಾಂತ್ ಕುಮಾರ್ ಪಟ್ನಾಯಕ್ ಹೇಳಿದ್ದಾರೆ.

ಮತ್ತೋರ್ವ ಭಕ್ತ ರಥದ ಚಕ್ರಗಳ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button