Homeಜನಮನಪ್ರಮುಖ ಸುದ್ದಿ

‘ಸಿಎಂ ಸಿದ್ದರಾಮಯ್ಯ ಅವರಿಗೆ ಗಣೇಶನ ಶಾಪ ತಟ್ಟಿದೆ’- ಆರ್.ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಗಣೇಶನ ಶಾಪ ತಟ್ಟಿದೆ. ಹಿಂದೂಗಳ ಶಾಪದಿಂದ ಸಿಎಂಗೆ ಈ ರೀತಿ ಆಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅರ್ಜಿಯನ್ನು ಹೈಕೋರ್ಟ್ ಎತ್ತಿಹಿಡಿದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವೇಳೆ ಹಲವೆಡೆ ಗಣೇಶ ಮೆರವಣಿಗೆ ಮಾಡೋಕೆ ಅವಕಾಶ ಕೊಡಲಿಲ್ಲ. ಹಿಂದೂಗಳಿಗೆ ಕಿರುಕುಳ ಕೊಟ್ಟಿದ್ದಾರೆ. ಅದರಿಂದಲೇ ಈ ರೀತಿಯಾಗಿದೆ ಎಂದು ಹೇಳಿದ್ದಾರೆ.

ಮಾಜಿ ಸಚಿವ ನಾಗೇಂದ್ರ ರಾಜೀನಾಮೆ ಮೊದಲ ಜಯವಾದರೆ, ಸಿಎಂ ವಿರುದ್ಧದ ತೀರ್ಪು ಎರಡನೇ ಜಯವಾಗಿದೆ. ಕಾಂಗ್ರೆಸ್‌ನವರು ರಾಜಭವನದ ಮೇಲೆ ಇಲ್ಲ ಸಲ್ಲದ ಆಪಾದನೆ ಮಾಡಿದ್ದರು. ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಮಾತಾಡಿದ್ದರು. ಈಗ ಕಾಂಗ್ರೆಸ್ ರಾಜ್ಯದ ಜನರ ಮುಂದೆ ಕ್ಷಮೆಯಾಚಿಸಬೇಕು. ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷ ಒಳಿತು ಮಾಡುತ್ತೆ ಎಂಬ ನಂಬಿಕೆಯಿತ್ತು. ಆದರೀಗ ಆ ನಂಬಿಕೆ ಹೋಗಿದೆ. ಭ್ರಷ್ಟಾಚಾರದ ಕಾಂಗ್ರೆಸ್, ಭ್ರಷ್ಟಾಚಾರದ ಸರ್ಕಾರ ಎಂದು ಜನರಿಗೆ ಗೊತ್ತಾಗಿದೆ. ನಾವು ರಾಜೀನಾಮೆ ಕೇಳೊದು ಒಂದು ಕಡೆ ಆದರೆ, ಕಾಂಗ್ರೆಸ್ ನವರೇ ಸಿದ್ದರಾಮಯ್ಯ ಅವರನ್ನ ಇಳಿಸೊಕೆ ಗುಂಡಿ ತೋಡಿದ್ದಾರೆ. ಈಗಾಗಲೇ ಏಳೆಂಟು ಜನ ಸಿಎಂ ಆಗೋಕೆ ಸೂಟ್ ಹೊಲಿಸಿಕೊಂಡು ಸಿದ್ಧರಾಗಿದ್ದಾರೆ ಎಂದು ಲೇವಡಿ ಮಾಡಿದರು.

Related Articles

Leave a Reply

Your email address will not be published. Required fields are marked *

Back to top button