ಪ್ರಮುಖ ಸುದ್ದಿ

ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಆಕ್ರೋಶ

ಕಾರ್ಮಿಕ ಸಂಘಟನೆಗಳ ಆಹೋ ರಾತ್ರಿ ಧರಣಿ

ಯಾದಗಿರಿಃ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ವಿರೋಧಿಸಿ ತಾಲೂಕಾ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಮತ್ತು ಕರ್ನಾಟಕ ಪ್ರಾಂತ ರೈತ ಸಂಘಗಳ ಆಶ್ರಯದಲ್ಲಿ ಜಿಲ್ಲೆಯ ಶಹಾಪುರ ನಗರದ ತಹಸೀಲ್ದಾರ ಕಚೇರಿ ಎದರು ಧರಣಿ ನಡೆಸಿ ತಹಸೀಲ್ದಾರರ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತರಿಗೆ ಮಾಸಿಕ 18 ಸಾವಿರ ರೂ.ಗಳ ಸಮಾನ ವೇತನ ನೀಡಬೇಕು. ಸಾರ್ವಜನಿಕ ಉದ್ಯಮೆಗಳ ಖಾಸಗೀಕರಣ ನಿಲ್ಲಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಭವಿಷ್ಯ ನಿಧಿ, ಪಿಂಚಣಿ ಕೊಡಬೇಕೆಂದು ಆಗ್ರಹಿಸಿದರು.

ಪಿಂಚಿಣಿ ವಿಮಾ ಜಾರಿ ಸೇರಿದಂತೆ ನಿರುದ್ಯೋಗ ನಿವಾರಣೆಗೆ ಉದ್ಯೋಗ ಸೃಷ್ಟಿಸಬೇಕು ಮತ್ತು ಶಿಕ್ಷಣ ಆರೋಗ್ಯ ಹಕ್ಕು ಕಾಯ್ದೆ ಜಾರಿಗೊಳಸಬೇಕು ಎಂದು ಧರಣಿನಿರತರು ಒತ್ತಾಯಿಸಿದರು.

ಧರಣಿಗೆ ಸ್ಪಂಧನೆ ದೊರೆಯದಿದ್ದಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಯಲಿದೆ ಎಂದು ಮುಖಂಡರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ದಾವಲಸಾಬ್ ನದಾಫ್, ಜೈಲಾಲ್ ತೋಟದಮನಿ, ಮಲ್ಲಯ್ಯ ಪೋಲಂಪಲ್ಲಿ, ಬಸವರಾಜ ಭಜಂತ್ರಿ, ನಿಂಗಣ್ಣ ತಿಪನಳ್ಳಿ ಸೇರಿದಂತೆ ಇತರರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button