ಪ್ರಮುಖ ಸುದ್ದಿ
ಹಾವು ಕಡಿದು ರೈತ ಮಹಿಳೆ ಸಾವು
ಸುರಪುರಃ ಹಾವು ಕಡಿದು ಮಹಿಳೆ ಸಾವು
ಯಾದಗಿರಿಃ ಜಮೀನಿನಲ್ಲಿ ಕೆಲಸ ಮಾಡುವಾಗ ಮಹಿಳೆಯೋರ್ವಳಿಗೆ ಹಾವು ಕಚ್ಚಿದ್ದು, ಅಸ್ವಸ್ಥಗೊಂಡ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಭೈರಿಮಡ್ಡಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ದೇವಮ್ಮ ಶಳ್ಳಿಗಿ (22) ಮೃತ ಮಹಿಳೆಯಾಗಿದ್ದು, ಕುಟುಂಬಸ್ಥರು ದುಖಃದಲ್ಲಿದ್ದಾರೆ. ಹೊಲದಲ್ಲಿ ಕೆಲಸ ಮಾಡುವಾಗ ಘಟನೆ ಸಂಭವಿಸಿದೆ. ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.