ಪ್ರಮುಖ ಸುದ್ದಿ
ಗುಜರಾತ ಚುನಾವಣಾ ಫಲಿತಾಂಶದ ಬಗ್ಗೆ ಯಾದಗಿರಿಯಲ್ಲಿ ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು?
ಯಾದಗಿರಿ: ಗುಜರಾತಿನಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಗೆದ್ದೂ ಸೋತಂತಾಗಿದೆ. ಕಳೆದ ಚುನಾವಣೆಗೆ ಹೋಲಿಸಿದರೆ ಗುಜರಾತಿನಲ್ಲಿ ಕಾಂಗ್ರೆಸ್ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದೆ. ಇದು ರಾಹುಲ್ ಗಾಂಧಿಯ ನಾಯಕತ್ವಕ್ಕೆ ಸಿಕ್ಕಿರುವ ಬೆಂಬಲ ಎಂದು ಸಿಎಂ ಸಿದ್ಧರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.
ಯಾದಗಿರಿ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ಧರಾಮಯ್ಯ ಒಂದು ರಾಜ್ಯದ ಫಲಿತಾಂಶ ಮತ್ತೊಂದು ರಾಜ್ಯದ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ. ನಮ್ಮ ಕರ್ನಾಟಕದಲ್ಲಿ ಆಡಳಿತ ವಿರೋಧಿ ಅಲೆಯೂ ಇಲ್ಲ ಎಂದಿದ್ದಾರೆ. ಹೀಗಾಗಿ, ಉಪ ಚುನಾವಣೆಗಳಲ್ಲಿ ನಾವು ಗೆದ್ದಿದ್ದೇವೆ. ಮುಂದಿನ ಚುನಾವಣೆಯಲ್ಲೂ ಗೆದ್ದು ರಾಹುಲ್ ಗಾಂಧಿಯವರಿಗೆ ಉಡುಗೊರೆ ನೀಡುತ್ತೇವೆ ಎಂದಿದ್ದಾರೆ.