ಅನಂತಕುಮಾರ ಹೆಗಡೆ ಕಡೆ ಬಾಣ ಬಿಟ್ಟರಾ ಬಹುಭಾಷಾ ನಟ ಪ್ರಕಾಶ್ ರೈ!
ಹಿಂದೂ ಕಾರ್ಯಕರ್ತ ಪರೇಶ್ ಮೆಸ್ತಾ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಲು ಯತ್ನಿಸುತ್ತಿದೆ ಎಂದು ಬೆಳಗಾವಿಯಲ್ಲಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಆರೋಪಿಸಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಒಮ್ಮೆ ಕನ್ನಡಿಯಲ್ಲಿ ಮುಖ ನೋಡಿಕೊಳ್ಳಲಿ. ಅವರಿಗೆ ಅವರದ್ದು ಮನುಷ್ಯ ಮುಖವೋ ರಾಕ್ಷಸ ರೂಪವೋ ಎಂಬುದು ಕಾಣಲಿದೆ. ಕಾಂಗ್ರೆಸ್ಸಿಗರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಲಿ ಅವರ ರಾಕ್ಷಸ ರೂಪ ನೋಡಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ. ಪರೇಶ್ ಮೆಸ್ತಾ ಅವರನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಲಾಗಿದೆ. ಆದ್ರೆ, ಸರ್ಕಾರ ಅಲ್ಪ ಸಂಖ್ಯಾತರ ಮತಬ್ಯಾಂಕಿಗಾಗಿ ಹಿಂದೂ ಕಾರ್ಯಕರ್ತನ ಕೊಲೆ ಕೇಸನ್ನು ಮುಚ್ಚಿ ಹಾಕು ಮುಂದಾಗಿದೆ ಎಂದು ಆರೋಪಿಸಿದ್ದಾರೆ.
ಮತ್ತೊಂದು ಕಡೆ ಬಂಟ್ವಾಳದಲ್ಲಿ ಸಚಿವ ರಮಾನಾಥ್ ರೈ ನೇತೃತ್ವದಲ್ಲಿ ನಡೆದ ಸಾಮರಸ್ಯ ನಡಿಗೆಯಲ್ಲಿ ಭಾಗವಹಿಸಿದ ಬಹುಭಾಷಾ ನಟ ಪ್ರಕಾಶ್ ರೈ ಕೋಮು ಗಲಭೆಗೆ ಪ್ರಚೋದನೆ ನೀಡುವವರನ್ನು ದೂರವಿಡಿ. ಸಾಮರಸ್ಯಕ್ಕೆ ಧಕ್ಕೆಯಾದಾಗ ನಾನು ಜನರ ಜೊತೆಗೆ ನಿಲ್ಲುತ್ತೇನೆ. ಹತ್ಯೆಯಲ್ಲಿ ರಾಜಕೀಯ ಮಾಡುವವರು ಮಹಾನ್ ರಾಕ್ಷಸರು ಎಂದು ಹೇಳಿದ್ದಾರೆ. ಆ ಮೂಲಕ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆಗೆ ಟಾಂಗ್ ನೀಡಿದ್ದಾರೆ ಎಂಬುದು ಚರ್ಚೆಗೆ ಗ್ರಾಸವಾಗಿದೆ. ಮೈಸೂರು ಬಿಜೆಪಿ ಸಂಸದ ಪ್ರತಾಪ್ ರೈ ವಿರುದ್ ಜಸ್ಟ್ ಆಸ್ಕಿಂಗ್ ಸಮರ ಸಾರಿದ್ಧ ಪ್ರಕಾಶ್ ರೈ ಈಗ ಬಿಜೆಪಿ ಫೈರ್ ಬ್ರ್ಯಾಂಡ್ ನಾಯಕ ಅನಂತ ಕುಮಾರ್ ಹೆಗಡೆ ವಿರುದ್ಧ ಬಾಣ ಬಿಟ್ಟಿದ್ದಾರೆ.