ಪ್ರಮುಖ ಸುದ್ದಿ
ಇಂದು ಮತ್ತು ನಾಳೆಯೂ ಮಳೆರಾಯನ ರುದ್ರನರ್ತನ!
(ಸಾಂದರ್ಭಿಕ ಚಿತ್ರ)
ಬೆಂಗಳೂರು : ಪ್ರವಾಹದಿಂದಾಗಿ ಉತ್ತರ ಕರ್ನಾಟಕ ಸಂಕಷ್ಟಕ್ಕೆ ಸಿಲುಕಿದೆ. ಕರಾವಳಿ, ಮಲೆನಾಡು ಭಾಗದಲ್ಲೂ ಮಳೆ, ಪ್ರವಾಹದಿಂದಾಗಿ ಜನ ತತ್ತರಿಸಿದ್ದಾರೆ. ಇಂದು ಮತ್ತು ನಾಳೆಯೂ ಮಳೆರಾಯನ ಆರ್ಭಟ ಮುಂದುವರೆಯುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯ ನರ್ತನ ಮುಂದುವರೆದಿದ್ದು ಕೆಲವೆಡೆ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಮುಂಜಾಗೃತ ಕ್ರಮವಾಗಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.