ಕಾಂಗ್ರೆಸ್ ಸರ್ಕಾರ ಅರಾಜಕತೆ ಮತ್ತು ಅಸ್ಥಿರತೆಗೆ ಕಾರಣ-ಸತೀಶ ಪೂನಿಯಾ
ರಾಜಸ್ಥಾನಃ ರಾಜ್ಯಸ್ಥಾನದಲ್ಲಿ ರಾಜಕೀಯ ನಡುವೆಯೇ ಬಿಕ್ಕಟ್ಟಿನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅರಾಜಕತೆ ಮತ್ತು ಅಸ್ಥಿರತೆಗೆ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಸತೀಶ ಪೂನಿಯಾ ಆರೋಪಿಸಿದ್ದಾರೆ.
ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆ ಯೇ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅರಾಜಕತೆ ಮತ್ತು ಅಸ್ಥಿರತೆಗೆ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸತೀಶ್ ಪೂನಿಯ ಆರೋಪಿಸಿದ್ದಾರೆ.
ಕಾಂಗ್ರೆಸ್ ಬಿಜೆಪಿಯನ್ನು ದೂಷಿಸಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಸಾಕ್ಷಿ ಎಂಬಂತೆ ಸಿಎಂ ಗೆಹ್ಲೋಟ್ ಪ್ರಧಾನಿ ಮೋದಿಜೀ ಅವರಿಗೆ ಪತ್ರ ಬರೆದು ತಮ್ಮ ಸರ್ಕಾರವನ್ನು ಬಿಜೆಪಿಯ ಕೇಂದ್ರ ಮಂತ್ರಿ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಈಶ್ವರಪ್ಪ ಸೇರಿದಂಗತೆ ಬಿಜೆಪಿಯ ಇತರೆ ಪ್ರಮುಖ ನಾಯಕರು ತಮ್ಮ ಸರ್ಕಾರ ಉರುಳಿಸಲು ಯತ್ನಿಸುತ್ತಿದ್ದಾರೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.
ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ತರಾಟೆಗೆ ತೆಗೆದುಕೊಂಡ ಪೂನಿಯಾ, ಯಾವ ಪಕ್ಷದ ನಾಯಕರು ಜಾಮೀನಿನ ಮೇಲೆ ಹೊರಗಿದ್ದಾರೆಯೋ ಅಥವಾ ಜೈಲಿನಲ್ಲಿದ್ದಾರೆಯೋ ಅವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತಿದ್ದಾರೆ ಎಂದು ಛೇಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತದಿಂದ ಅರಾಜಕತೆ, ಅಸ್ಥಿರತೆ ಉಂಟಾಗಿರುವದನ್ನು ರಾಜ್ಯದ ಜನತೆಗೆ ಈಗ ಅರ್ಥವಾಗಿದೆ ಎಂಬುದು ನನ್ನ ಭಾವನೆ ಎಂದು ಬಿಜೆಪಿಯ ಪೂನಿಯಾ ತಿಳಿಸಿದ್ದಾರೆ.