ಪ್ರಮುಖ ಸುದ್ದಿ

ಹಿಟ್ ಅಂಡ್ ರನ್ : ಮದುವೆಗೆ ಬಂದಿದ್ದ ಇಬ್ಬರು ಅಪಘಾತದಲ್ಲಿ ಸಾವು

ಶಹಾಪುರ : ತಾಲ್ಲೂಕಿನ ಭೀಮರಾಯನ ಗುಡಿ ಬಳಿ ವಾಯು ವಿಹಾರಕ್ಕೆ ತೆರಳಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಸಾವಿಗೀಡಾದ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಶಹಾಪುರ ತಾಲೂಕಿನ ಹುಂಡೆಕಲ್ ಗ್ರಾಮದ ಗಂಗಾಧರಸ್ವಾಮಿ (35) ಹಾಗೂ ಸುರಪುರ ಮೂಲದ ಮೋಹನ್ (38) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಸಂಬಂಧಿಕರ ಮದುವೆಗೆಂದು ಬಂದಿದ್ದ ಗಂಗಾಧರಸ್ವಾಮಿ ಹಾಗೂ ಮೋಹನ್ ಬೆಳಗ್ಗೆ ವಾಯು ವಿಹಾರಕ್ಕೆ ತೆರಳಿದ್ದರು. ಈ ವೇಳೆ ಅತಿವೇಗದಲ್ಲಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಆದರೆ, ಮಾನವೀಯತೆ ಮರೆತ ಚಾಲಕ ವಾಹನ ನಿಲ್ಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಬದಲು ವಾಹನ ಸಮೇತ ಪರಾರಿ ಆಗಿದ್ದಾನೆ. ಭೀಮರಾಯನ ಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Related Articles

Leave a Reply

Your email address will not be published. Required fields are marked *

Back to top button