ಪ್ರಮುಖ ಸುದ್ದಿ

ಕೆಂಭಾವಿ ಪಟ್ಟಣದಲ್ಲಿ ಸರಣಿ ಕಳ್ಳತನಃ ಶ್ವಾನದಳದಿಂದ ಪರಿಶೀಲನೆ

 

ಯಾದಗಿರಿಃ ಸರಣಿ ಅಂಗಡಿಗಳ ಕಳ್ಳತನವಾದ ಘಟನೆ ಗುರುವಾರ ರಾತ್ರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ನಡೆದಿದೆ.

ರಾತ್ರಿ ಸಮಯದಲ್ಲಿ ಬಾರ್, ಕಿರಾಣಿ ಅಂಗಡಿಗಳಿಗೆ ಕಳ್ಳರು ಕನ್ನ ಹಾಕಿದ್ದು, ಸುಮಾರು 7 ಅಂಗಡಿಗಳ ಸೆಟರ್, ಕೀಲಿ ಮುರಿದು ಖದೀಮರು ಹಣ, ಮದ್ಯ ಇತರೆ ಸಾಮಾಗ್ರಿಗಳನ್ನು ದೋಚಿದ್ದಾರೆ.
ಅಂದಾಜು ನಾಲ್ಕು ಲಕ್ಷ ಮೌಲ್ಯದ ಸಾಮಾಗ್ರಿ, ಹಣ ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಶ್ವಾನ ದಳದವರಿಗೆ ಮಾಹಿತಿ ನೀಡಿದ್ದಾರೆ. ಶ್ವಾನ ಸಮೇತ ಸ್ಥಳಕ್ಕೆ ಆಗಮಿಸಿದ ನುರಿತ, ಪತ್ತೇದಾರಿ ಪೊಲೀಸರು ಪರಿಶೀಲನೆ ನಡೆಸುತಿದ್ದಾರೆ. ಈ ಕುರಿತು ಕೆಂಭಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button