ಪ್ರಮುಖ ಸುದ್ದಿ
ಸ್ಯಾನಿಟೈಸರ್ ಕುಡಿದು ವ್ಯಕ್ತಿಯೋರ್ವನ ಸಾವು.?
ಸ್ಯಾನಿಟೈಸರ್ ಕುಡಿದ ವ್ಯಕ್ತಿ ಸಾವು.?
ಧಾರವಾಡಃ ಕಳೆದ ಮೂರು ದಿನಗಳಿಂದ ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದ ಪರಿಣಾಮ ಅಸ್ವಸ್ಥಗೊಂಡಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಧಾರವಾಡ ಜಿಲ್ಲೆಯ ಕಲಘಟಕಿ ತಾಲೂಕಿನ ಗಂಬ್ಯಾಪುರ ಗ್ರಾಮದ ಬಸವರಾಜ ವೆಂಕಪ್ಪ ಎಂಬುವರೇ ಸ್ಯಾನಿಟೈಸರ್ ಸೇವಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ತೀವ್ರ ಅಸ್ವಸ್ಥಗೊಂಡಿದ್ದ ಬಸವರಾಜನನ್ನು ಇಂದು ಬೆಳಗ್ಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.
ಮೇಲ್ನೋಟಕ್ಕೆ ಈತ ಸ್ಯಾನಿಟೈಸರ್ ನಲ್ಲಿ ಅಲ್ಕೋಹಾಲ್ ಪ್ರಮಾಣ ಜಾಸ್ತಿ ಇರುತ್ತೆ ಎನ್ನುವ ಕಾರಣ ಅದನ್ನು ಕುಡಿದಿದ್ದು, ಪ್ರಾಣಕ್ಕೆ ಅಪಾಯ ತಂದುಕೊಂಡಿದ್ದಾನೆ ಎಂದು ಕುಟುಂಬ ಮೂಲಗಳು ಸಹ ತಿಳಿಸಿವೆ. ಆದರೆ ವೈದ್ಯರ ಪ್ರಕಾರ ಮರಣೋತ್ತರ ಪರೀಕ್ಷೆ ನಂತರವೇ ಸ್ಪಷ್ಟ ಮಾಹಿತಿದೊರೆಯಲಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.