ಪ್ರಮುಖ ಸುದ್ದಿ
ಸಿದ್ರಾಮಯ್ಯ ಟೀಕೆ ಮಾಡಲು ನಿಸ್ಸೀಮ- ಸಿದ್ದು ವಿರುದ್ಧ ಹರಿಹಾಯ್ದ ಶೆಟ್ಟರ್
ಸಿದ್ರಾಮಯ್ಯ ಟೀಕೆ ಮಾಡಲು ನಿಸ್ಸೀಮರು- ಸಿದ್ದು ವಿರುದ್ಧ ಹರಿಹಾಯ್ದ ಶೆಟ್ಟರ್
ಕಲಬುರ್ಗಿಃ ಪ್ರತಿಪಕ್ಷದವರಿಗೆ ಟೀಕಿಸಲು ಯಾವುದೇ ವಿಷಯಗಳಿಲ್ಲ. ಹೀಗಾಗಿ ಇಲ್ಲ ಸಲ್ಲದ ವಿಷಯಗಳ ಮೇಕೆ ಕೀಳಾಗಿ ಮಾತನಾಡುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗಧೀಶ ಶೆಟ್ಟರ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಮಾಧ್ತಮದವರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ನಾಯಕ ಸಿದ್ರಾಮಯ್ಯ ಟೀಕೆ ಮಾಡಲು ನಿಸ್ಸೀಮರು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇದು ಒಳ್ಳೆಯದಲ್ಲ ಎಂದರು.
ಇದೇ ವೇಳೆ ಸ್ಯಾಂಡಲ್ ವುಡ್ ಡ್ರಗ್ಸ್ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಡ್ರಗ್ಸ್ ಮಾಫಿಯಾ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ. ಎಂತಹ ಪ್ರಭಾವಿಯಾಗಿದ್ದರೂ ಯಾವುದೇ ಮುಲಾಜಿಲ್ಲದೆ ಸೂಕ್ತ ಕ್ರಮಕೈಗೊಳ್ಳಲಾಗುವದು ಎಂದು ತಿಳಿಸಿದರು.