ಪ್ರಮುಖ ಸುದ್ದಿ

‘ರಾಜ್ಯಪಾಲರು ಮಾಡಿರುವ ಕೆಲಸವನ್ನ ಕಾಂಗ್ರೆಸ್ ನಾಯಕರು ಹೇಳಿದ್ದಾರೆ’- ಸಿಎಂ

ಬೆಂಗಳೂರು : ರಾಜ್ಯಪಾಲರು ಮಾಡಿರುವ ಕೆಲಸವನ್ನು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಇದನ್ನು ಹೇಳಿದರೆ ಹೀಯಾಳಿಸಿದ ರೀತೀನಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರಾಜ್ಯಪಾಲರನ್ನು ಕಾಂಗ್ರೆಸ್ ನಾಯಕರು ನಿಂದಿಸಿರುವ ಕುರಿತು ಬಿಜೆಪಿಯಿಂದ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ರಾಜ್ಯಪಾಲರು ಮಾಡಿರುವ ಕೆಲಸವನ್ನು ನಮ್ಮ ನಾಯಕರು ಹೇಳಿದ್ದಾರೆ. ಅದನ್ನು ರಾಜ್ಯಪಾಲರನ್ನು ಹೀಯಾಳಿಸಿದರು ಅನ್ನೋದು ಸರಿಯಲ್ಲ. ಶಶಿಕಲಾ ಜೊಲ್ಲೆ ಕೇಸ್ ಇದೆ, ನಿರಾಣಿ ಕೇಸ್ ಇದೆ. ಕುಮಾರಸ್ವಾಮಿ ಕೇಸ್ ಇದೆ. ಜನಾರ್ದನ ರೆಡ್ಡಿ ಮೇಲೆ ಕೇಸ್ ಇದೆ. ಇವುಗಳಿಗೆ ಅನುಮತಿ ನೀಡಿಲ್ಲ. ಇದನ್ನು ಹೇಳಿದ್ರೆ ತಪ್ಪಾ ಎಂದು ಕೇಳಿದ್ದಾರೆ.

ರಾಜ್ಯಪಾಲರ ಹುದ್ದೆ ಸಂವಿಧಾನಿಕ ಹುದ್ದೆ. ಅದರ ಬಗ್ಗೆ ಗೌರವ ಇರಬೇಕು. ನಾವು ಹೇಳೋದು ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ಕೆಲಸ ಮಾಡಬೇಕು. ಕೇಂದ್ರ ಸರ್ಕಾರದ ಪ್ರತಿನಿಧಿ ಆಗಿ ಕೆಲಸ ಮಾಡೋದು ಬೇಡ ಎಂದು ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ಆಡಿದ ಮಾತನ್ನು ಅವರು ಸಮರ್ಥನೆ ಮಾಡಿಕೊಂಡಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button