ಪ್ರಮುಖ ಸುದ್ದಿ

ಕ್ರೈಂ, ಅಕ್ರಮ ಚಟುವಟಿಕೆ ತಡೆಗೆ ರಾಜ್ಯ ಸರ್ಕಾರ ವಿಫಲಃ ಯಡಿಯೂರಪ್ಪ

ಚಿತ್ರದುರ್ಗಃ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಪ್ರಾಮಾಣಿಕ ಪ್ರಯತ್ನ ಅಗತ್ಯ. ಕಾಂಗ್ರೆಸ್ ಸರ್ಕಾರ ಭದ್ರಾ ಯೋಜನೆ ಬಗ್ಗೆ ಹುಸಿ ಭರವಸೆ ನೀಡುವ ಮೂಲಕ ಜನರಿಗೆ ದ್ರೋಹ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಚಿತ್ರದುರ್ಗದಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕೊಲೆ ಸುಲಿಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾನೂನು ಸುವ್ಯವಸ್ಥೆ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಅಲ್ಲದೆ ಈ ಭಾಗದ ಹೊಸದುರ್ಗ ವೇದಾವತಿ ನದಿಯಲ್ಲಿ ಕಾಂಗ್ರೆಸ್ ಶಾಕರಿಂದ ಅಕ್ರಮ ಮರಳು ದಂಧೆ ನಡೆಯುತ್ತಿದೆ. ಜಿಲ್ಲೆಯ ರಸ್ತೆಗಳು ಹಾಳಾಗಿ ಹೋಗಿದ್ದು, ಜಿಲ್ಲೆಯ ಅಭಿವೃದ್ಧೀ ಕುಂಠಿತಗೊಂಡಿದೆ. ಸರ್ಕಾರ ಯಾವುದೆ ಕ್ರಮಕ್ಕೆ ಮುಂದಾಗುತ್ತಿಲ್ಲ.

ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ನೆರೆ ರಾಜ್ಯದ ಸಿಎಂ ಜೊತೆ ಮಾತುಕತೆ ನಡೆಸದೆ ರಾಜಕೀಯ ಮಾಡುತ್ತಿದ್ದಾರೆ. ರೈತ ಪರವ ನಿಲ್ಲುವ ಪ್ರಾಮಾಣಿಕ ಪ್ರಯತ್ನವು ಸಹ ಸಿಎಂ ಸಿದ್ರಾಮಯ್ಯ ಮಾಡುತ್ತಿಲ್ಲ ಎಂದು ಕಿಡಿಕಾರಿದರು.

ಮತ್ತು ವಿಜಯಪುರದಲ್ಲಿ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ದಲಿತ ಸಂಘಟನೆಗಳು ಕೈಗೊಂಡ ವಿಜಯಪುರ ಚಲೋ ತಡೆಯುವುದು ತಪ್ಪು. ಶಾಂತಿಯುತ ಹೋರಾಟಕ್ಕೆ ಅವಕಾಶ ಕಲ್ಪಿಸಬೇಕೆಂದು ಎಂದರು.

Related Articles

Leave a Reply

Your email address will not be published. Required fields are marked *

Back to top button