ಪ್ರಮುಖ ಸುದ್ದಿ
ಕಲಬುರಗಿ: ನಾಡ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
ಕಲಬುರಗಿ : ನಗರದ ಹೊರವಲಯದಲ್ಲಿರುವ ವಿಶ್ವಾರಾಧ್ಯ ದೇಗುಲದ ಸಮೀಪ ಅಕ್ರಮವಾಗಿ ನಾಡ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮೀಣ ಠಾಣೆ ಪೊಲೀಸ್ರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮದ್ಯಪ್ರದೇಶ ಮೂಲದ ಸಿಕಂದರ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಎರಡು ನಾಡ ಪಿಸ್ತೂಲ್ , ಹದಿನನೈದು ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.
ನಾಡ ಪಿಸ್ತೂಲ್ ಮಾರಾಟ ಜಾಲದ ಮೇಲೆ ತೀವ್ರ ನಿಗಾ ಇಟ್ಟಿರುವ ಕಲಬುರಗಿ ಪೊಲೀಸರು ಇತ್ತೀಚೆಗೆ ಅನೇಕ ಕಡೆ ದಾಳಿ ನಡೆಸಿದ್ದಾರೆ. ನಾಡ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯುತ್ತಿದ್ದಾರಲ್ಲದೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುವವರನ್ನು ಮಟ್ಟ ಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ. ಹೀಗಾಗಿ, ಕಲಬುರಗಿ ಪೊಲೀಸರ ಬಗ್ಗೆ ಜನ ಸಾಮಾನ್ಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.