ಪ್ರಮುಖ ಸುದ್ದಿ

ಹೈದ್ರಾಬಾದ್ ಗ್ಯಾಂಗ್ ರೇಪ್ಃ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಲಿ-ಹೆಗ್ಡೆ

ಬಾಗಲಕೋಟೆಃ  ಹೈದರಾಬಾದ್ ನಲ್ಲಿ  ಪಶುವೈದ್ಯೆಯೋರ್ವಳ ಮೇಲೆ ನಡೆದ ಗ್ಯಾಂಗ್ ರೇಪ್ ಮತ್ತು ಹತ್ಯೆ ಮಾಡಿದ ಕಾಮುಕರಿಗೆ ಗಲ್ಲು ಶಿಕ್ಷೆ ಆಗಲೇಬೇಕು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಗ್ರಹಿಸಿದ್ದಾರೆ.

ಜಿಲ್ಲೆಯ ಹುನಗುಂದ ತಾಲೂಕಿನಲ್ಲಿ ವಕೀಲರ ಸಂಘ ಆಯೋಜಿಸಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಪ್ರಕರಣಗಳ ಆರೋಪಿಗಳಿಗೆ, ಕಾಮುಕರಿಗೆ ಗಲ್ಲು ಶಿಕ್ಷೆಯಾಗಲೇಬೇಕು.

ಅಮಾನವೀಯ ಕೃತ್ಯ ನಡೆಸಿದ ಕಾಮುಕರಿಗೆ ಗಲ್ಲು ಶಿಕ್ಷೆ ಬಿಟ್ಟು ಬೇರೆ ಯಾವ ಶಿಕ್ಷೆಯೂ ಸರಿಯಲ್ಲ. ಆದರೂ ಕೆಲವು ಬಾರಿ ಮಾನವೀಯ ಹಕ್ಕಿನ ಮೇಲೆ ಗಲ್ಲು ಶಿಕ್ಷೆ ಬೇಡ ಎಂದು ವಾದ ಮಾಡುತ್ತಾರೆ. ಹೀಗಾಗಿ ಇಂತಹ ಪ್ರಕರಣಗಳಲ್ಲಿ ಕೆಲ ಬಾರಿ ಆರೋಪಿಗಳನ್ನು ಮಾನವೀಯ ದೃಷ್ಟಿಯಿಂದ ಗಲ್ಲು ಶಿಕ್ಷೆ ಬಿಟ್ಟು ಬೇರೆ ಶಿಕ್ಷೆಗೆ ಮಾತ್ರ ಗುರಿಯಾಗುತ್ತಿದ್ದಾರೆ.

ಇಂತಹ ಘಟನೆಯಾದಾಗ ಗಲ್ಲು ಶಿಕ್ಷೆ ನೀಡಲು ವಿಳಂಬ ಮಾಡಬಾರದು. ತೀರ್ಪು ತೀವ್ರಗತಿಯಲ್ಲಿ ಪ್ರಕಟವಾಗಬೇಕು. ತಡವಾದಲ್ಲಿ ಅದರ ಪ್ರಾಮುಖ್ಯ ಹೋಗುತ್ತದೆ ಎಂದರು.

 

Related Articles

Leave a Reply

Your email address will not be published. Required fields are marked *

Back to top button