ಪ್ರಮುಖ ಸುದ್ದಿ
ಪಡಿತರ ಕಾರ್ಡ್ ತಿದ್ದುಪಡಿಗೆ ಸರ್ವರ್ ಸಮಸ್ಯೆ: ಫಲಾನುಭವಿಗಳ ಪರದಾಟ

ಲೋಕಸಭೆ ಚುನಾವಣೆಯ ಸಲುವಾಗಿ ಆಹಾರ ಇಲಾಖೆ ಬಿಪಿಎಲ್ ಕಾರ್ಡ್ ಗಳ ತಿದ್ದುಪಡಿಗೆ ಬ್ರೇಕ್ ಹಾಕಿತ್ತು.
ಇದೀಗಾ ಮೂರು ದಿನದಿಂದ ತಿದ್ದುಪಡಿಗೆ ಅವಕಾಶ ನೀಡಿದ್ದಾರೆ. ಆದರೆ ಬೆಂಗಳೂರು ಒನ್ ಸೆಂಟರ್ಗಳಲ್ಲಿ ಸರ್ವರ್ ಸಮಸ್ಯೆ ಎದುರಾಗಿದ್ದು, ಫಲಾನುಭವಿಗಳು ಪರದಾಡುತ್ತಿದ್ದಾರೆ.
ಇನ್ನು ಈ ತಿದ್ದುಪಡಿ ಸಮಸ್ಯೆಯಿಂದಾಗಿ ಅನ್ನಭಾಗ್ಯದ ಹಣ ಬರುವುದಕ್ಕೂ ಬ್ರೇಕ್ ಬಿದ್ದಿದೆ. ಹಣವು ಇಲ್ಲದೇ ಅಕ್ಕಿಯು ಇಲ್ಲದೇ ಬಿಪಿಎಲ್ ಫಲಾನುಭವಿಗಳು ಪರದಾಡುವಂತಾಗಿದೆ.