ಪ್ರಮುಖ ಸುದ್ದಿ
ಭೀಕರ ಅಪಘಾತ : ನಾಲ್ವರು ಸಾವು, ನಾಲ್ವರಿಗೆ ಗಾಯ
ಚಿತ್ರದುರ್ಗ: ಕುಂಚಿಗನಾಳು ಬಳಿ ಇನೋವಾ ಕಾರು ಟೈರ್ ಬರ್ಸ್ಟ್ ಆಗಿ ಪಲ್ಟಿಯಾಗಿದ್ದು ರಸ್ತೆ ವಿಭಜಕ ದಾಟಿ ಎದುರುಗಡೆ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ರೆ ಇನ್ನುಳಿದ ನಾಲ್ವರು ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಮೂವರು ಮಹಿಳೆಯರು ಹಾಗೂ ಓರ್ವ ಪುರುಷ ಕೊನೆಯುಸಿರೆಳೆದಿದ್ದಾನೆ.
ಬೆಂಗಳೂರು ಮೂಲದ ಒಂದೇ ಕುಟುಂಬದ ಒಟ್ಟು ಎಂಟು ಜನ ಇನೋವಾದಲ್ಲಿ ಬಾದಾಮಿಯ ಬನಶಂಕರಿ ದೇಗುಲಕ್ಕೆ ತೆರಳುತ್ತಿದ್ದರು. ಟೈರ್ ಬರ್ಸ್ಟ್ ಆದ ಪರಿಣಾಮ ಅಪಘಾತ ಸಂಭವಿಸಿದೆ. ಇಬ್ಬರು ಪುಟ್ಟ ಮಕ್ಕಳು ಸೇರಿ ನಾಲ್ವರು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಬೆಂಗಳೂರು ಮೂಲದ ಅಶೋಕ (35), ಶಾಮಲಾ (60), ಶೋಭಾ (45) , ಸುಕನ್ಯ (65) ಎಂದು ಗುರುತಿಸಲಾಗಿದೆ ಎಂದು ಚಿತ್ರದುರ್ಗ ಎಸ್ಪಿ ಡಾ.ಕೆ.ಅರುಣ್ ಮಾಹಿತಿ ನೀಡಿದ್ದಾರೆ.