Homeಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಇಂದು ಸಂಪುಟ ಸಭೆಯಲ್ಲಿ ವೇತನ ಹೆಚ್ಚಳಕ್ಕೆ ಸಮ್ಮತಿ ಸಾಧ್ಯತೆ!

ಬೆಂಗಳೂರು: ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು  ಇಂದು ಸಿಹಿಸುದ್ದಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯ ಸರಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ಸಂಬಂಧ ಇಂದು ಸಂಪುಟ ಸಭೆ ನಿರ್ಣಯ ಕೈಗೊಳ್ಳುವ ನಿರೀಕ್ಷೆಯಿದೆ.

ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಸಂಪುಟ ಕಾರ್ಯಸೂಚಿಯಲ್ಲಿ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ವಿಷಯ ಸೇರ್ಪಡೆಯಾಗಿದೆ. ಬೇಡಿಕೆಗಾಗಿ ಮಾಸಾಂತ್ಯದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವ ಎಚ್ಚರಿಕೆಯನ್ನು ನೌಕರ ಸಂಘಟನೆಗಳು ನೀಡಿದ್ದವು. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಸಂಪುಟ ಸಭೆಯಲ್ಲಿ ಈ ವಿಚಾರದಲ್ಲಿ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. 7ನೇ ವೇತನ ಆಯೋಗವು ಶೇ.27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಮಾರ್ಚ್ 2023 ರಿಂದಲೇ ಶೇ.17 ಮಧ್ಯಂತರ ಪರಿಹಾರ ನೀಡಲಾಗಿದ್ದು, ಇನ್ನು ಗರಿಷ್ಠ ಶೇ.10.5 ವೇತನ ಹೆಚ್ಚಳ ಆಗಬೇಕಿದೆ. 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರಿಗೆ ಅಂತಿಮವಾಗಿ ಶೇ.8 ರಿಂದ ಶೇ.8.5 ರಷ್ಟು ವೇತನ ಹೆಚ್ಚಳ ನಿರೀಕ್ಷಿಸಲಾಗಿದ್ದು, ಒಟ್ಟಾರೆ ಏರಿಕೆ ಮೂಲವೇತನದ ಶೇ.25 ರಿಂದ ಶೇ.25.5 ತಲುಪುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ

Related Articles

Leave a Reply

Your email address will not be published. Required fields are marked *

Back to top button