ಪ್ರಮುಖ ಸುದ್ದಿ
ಕಾಯುತ್ತಿರುವೆ, ಕರೆ ಬಂದರೆ ಮಂತ್ರಿಗಿರಿ ಕನ್ ಫರ್ಮ್ : ಶಾಸಕ ರಾಜೂಗೌಡ
ಬೆಂಗಳೂರು: ನಾಳೆ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿದ್ಧತೆ ನಡೆಸಿದ್ದಾರೆ. ಶಾಸಕರಾದ ಉಮೇಶ ಕತ್ತಿ ಹಾಗೂ ಅರವಿಂದ ಲಿಂಬಾವಳಿ ನಾಳೆ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಸಕಲ ಸಿದ್ಧತೆಗಳು ನಡೆದಿದ್ದು ಹೈಕಮಾಂಡ್ ಗ್ರೀನ್ ಸಿಗ್ನಲ್ ಮಾತ್ರ ಬಾಕಿಯಿದೆ ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಸುರಪುರದ ಬಿಜೆಪಿ ಶಾಸಕ ರಾಜೂಗೌಡ ಸಹ ಮಂತ್ರಿಗಿರಿಗೆ ಪಟ್ಟು ಹಿಡಿದಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಶಾಸಕ ರಾಜೂಗೌಡ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಬೇಕಿದೆ. ಸಚಿವ ಸ್ಥಾನ ನೀಡಿದರೆ ನಿಭಾಯಿಸುವ ವಿಶ್ವಾಸವಿದ್ದು ಸಿಎಂ ಬಳಿ ಮಂತ್ರಿಗಿರಿಗಾಗಿ ಮನವಿ ಮಾಡಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಆದರೆ, ನೀವು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿ ಎಂದು ಕರೆ ಬರುವವರೆಗೂ ಖಚಿತವಿಲ್ಲ. ನಾನು ಮೊಬೈಲ್ ಆಫ್ ಮಾಡದೇ ಕೈಲಿಡಿದು ಕಾಯುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.