ಪ್ರಮುಖ ಸುದ್ದಿ

ನಿವೃತ್ತ ಯೋಧ ಚನ್ನಮಲ್ಲಯ್ಯ ಹಿರೇಮಠ ಶೂಟ್ ಔಟ್ !

ಧಾರವಾಡ : ನಗರದ ಮೋರೆ ಪ್ಲಾಟ್ ನಿವಾಸಿಯಾದ ನಿವೃತ್ತ ಯೋಧ ಚನ್ನಮಲ್ಲಯ್ಯ ಹಿರೇಮಠ ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಹುಬ್ಬಳ್ಳಿ ನಗರದ ಎಕ್ಸಿಸ್ ಬ್ಯಾಂಕಿನಲ್ಲಿ ಸೆಕುರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚನ್ನಮಲ್ಲಯ್ಯ ಹಿರೇಮಠ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನಿವೃತ್ತ ಯೋಧ ಚನ್ನಮಲ್ಲಯ್ಯ ಹಿರೇಮಠ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಉಪನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಘಟನೆಗೆ ನಿಖರವಾದ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button