Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ

‘ಗೃಹಲಕ್ಷ್ಮಿ ಯೋಜನೆಯಿಂದ ಮನೆಯ ಯಜಮಾನಿಯರು ಆರ್ಥಿಕವಾಗಿ ಸಬಲರಾಗಿದ್ದಾರೆ’ – ಡಿಕೆಶಿ

ಬೆಂಗಳೂರು: ಬಡವರ ಪಾಲಿನ ನಂದಾದೀಪವಾದ ಗೃಹಲಕ್ಷ್ಮಿ ಯೋಜನೆಗೆ ವರ್ಷ ತುಂಬಿದ್ದು, ಒಂದು ವರ್ಷದಲ್ಲಿ ಮನೆಯ ಯಜಮಾನಿಯರಿಗೆ 25,248 ಕೋಟಿ ರೂ. ಜಮೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಆಗ ವಿರೋಧ ಪಕ್ಷಗಳು ಗ್ಯಾರಂಟಿಗಳು ಘೋಷಣೆಗಳಾಗಿಯೇ ಉಳಿಯಲಿವೆ ಎಂದು ಗೇಲಿಮಾಡಿದ್ದರು. ಕಾಂಗ್ರೆಸ್ ಪಕ್ಷ ಕೊಟ್ಟ ಮಾತು ತಪ್ಪುವುದಿಲ್ಲ ಎಂಬುದು ಜನರಿಗೆ ಗೊತ್ತಿತ್ತು ಎಂದು ಅವರು ಹೇಳಿದ್ದಾರೆ.

ಅಧಿಕಾರಕ್ಕೆ ಬಂದ ತಕ್ಷಣವೇ ನಮ್ಮ ಸರ್ಕಾರ ಜನರಿಗೆ ನೀಡಿದ್ದ ವಾಗ್ದಾನದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆವು. ಅದರಲ್ಲಿ ಗೃಹ ಲಕ್ಷ್ಮಿಯೂ ಒಂದು. ಈ ಯೋಜನೆ ಜಾರಿ ಬಂದು ಆ.30 ಕ್ಕೆ ಒಂದು ವರ್ಷ ಪೂರ್ಣಗೊಂಡಿದೆ ಎಂದರು.

ಈ ಯೋಜನೆಯಿಂದ ಮನೆಯ ಯಜಮಾನಿಯರು ಆರ್ಥಿಕವಾಗಿ ಸಬಲರಾಗಿದ್ದು ಮಾತ್ರವಲ್ಲದೇ ಕುಟುಂಬ ನಿರ್ವಹಣೆಗೂ ಸಹಕಾರಿಯಾಗಿದೆ. ಕಳೆದ ವರ್ಷ ರಾಜ್ಯವನ್ನು ಕಾಡಿದ ಭೀಕರ ಬರಗಾಲದಲ್ಲೂ ಗ್ರಾಮೀಣ ಭಾಗದ ಮಹಿಳೆಯರು ಯಾವುದೇ ತೊಂದರೆ ಇಲ್ಲದೇ ಸುಸೂತ್ರವಾಗಿ ಸಂಸಾರ ನಡೆಸಿದ್ದಾರೆ ಎಂದರೆ ಅದಕ್ಕೆ ಗೃಹ ಲಕ್ಷ್ಮಿಯೇ ಸಾಕ್ಷಿ ಎಂದು ಹೇಳಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button