ವಿಶ್ವ ತಂಬಾಕು ರಹಿತ ದಿನಃ ಸಹಿ ಸಂಗ್ರಹಕ್ಕೆ ಡಿಸಿ ಚಾಲನೆ
ಸಹಿ ಸಂಗ್ರಹ ಅಭಿಯಾನಕ್ಕೆ ಡಿಸಿ ಚಾಲನೆ
ಯಾದಗಿರಿಃ ತಂಬಾಕು ಉತ್ಪನ್ನಗಳ ಅಧಿನಿಯಮ-2003 (ಕೊಟ್ಪಾ-2003) ಕಾಯ್ದೆಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಸಲಹೆ ನೀಡಿದರು.
ವಿಶ್ವ ತಂಬಾಕು ರಹಿತ ದಿನ” ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಂಬಾಕು ಸೇವನೆಯಿಂದ ಬದುಕು ದುಸ್ಥರವಾಗಲಿದೆ. ಅನಾರೋಗ್ಯದಿಂದ ಅಸುನೀಗುವ ಸಾವು ನೋವಿನ ಮಧ್ಯ ನರಳಬೇಕಾಗುತ್ತದೆ. ಇದರಿಂದ ಿಡಿ ಕುಟುಂಬ ಬದುಕಿನ ಸಮಸ್ಯೆಯ ಸುಳಿಯಲ್ಲಿ ಮುಳಗಲಿದೆ. ಕಾರಣ ತಂಬಾಕು ಸೇವನೆಯಿಂದ ಸಂಸಾರ ಹಾಳಾಗುವ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಭಗವಾನ್ ಸೋನವಣೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹಬೀಬ ಉಸ್ಮಾನ್ ಪಟೇಲ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಭಗವಂತ ಅನವಾರ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ.ವಿವೇಕಾನಂದ ಟೆಂಗೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಸಿದ್ದೇಶ್ವರಪ್ಪ ಜಿ.ಬಿ., ಸೋಂಕು ಶಾಸ್ತ್ರಜ್ಞರಾದ ಡಾ.ಸುನೀತಾ ನಿನ್ನೆಕರ್, ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಮಹಾಲಕ್ಷ್ಮೀ ಸಜ್ಜನ್, ಜಿಲ್ಲಾ ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕರಾದ ರಘುವೀರಸಿಂಗ್ ಠಾಕೂರ್, ನಗರಸಭೆ ಆರೋಗ್ಯ ನಿರೀಕ್ಷಕ ಸುರೇಶ ಶೆಟ್ಟಿ, ತಂಬಾಕು ನಿಯಂತ್ರಣ ಆಪ್ತ ಸಮಾಲೋಚಕ ನಟರಾಜ, ಡಾಟಾ ಮ್ಯಾನೇಜರ್ ಎಚ್.ಆಂಜನೇಯ ಅವರು ಉಪಸ್ಥಿತರಿದ್ದರು.




