ಪ್ರಮುಖ ಸುದ್ದಿ
ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ ಓರ್ವನ ಸಾವು
ಯಾದಗಿರಿ, ಶಹಾಪುರಃ ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಲ್ಲಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೋರ್ವ ತೀವ್ರ ಗಾಯಗೊಂಡ ಘಟನೆ ತಾಲೂಕಿನ ಉಕ್ಕಿನಾಳ ಕ್ರಾಸ್ ಹತ್ತಿರ ಶುಕ್ರವಾರ ಸಂಜೆ ನಡೆದಿದೆ.
ಶರಣಪ್ಪ ತಂದೆ ಕಾಶಪ್ಪ(40) ಸಾ.ಸುಂಬಡ ತಾ.ಯಡ್ರಾಮಿ. ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಬೈಕ್ ಸವಾರನ ಹಿಂಬದಿ ಕುಳಿತಿದ್ದ ಗೊಲ್ಲಾಳಪ್ಪ ಖಾನಗೌಡರ (42) ತೀವ್ರಗಾಯಗೊಂಡಿದ್ದು, ಚಿಕಿತ್ಸೆಗಾಗಿ ಈತನನ್ನು ಕಲಬುರ್ಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.
ವಯಕ್ತಿಕ ಕೆಲಸದ ನಿಮಿತ್ತ ಶುಕ್ರವಾರ ನಗರಕ್ಕೆ ಆಗಮಿಸಿದ್ದ ಈ ಇಬ್ಬರು ನಗರದಲ್ಲಿ ಕುರಿಗಳಿಗೆ ಬೇಕಾದ ಔಷಧಿ ಖರೀದಿ ಮಾಡಿಕೊಂಡು ಮರಳಿ ತಮ್ಮೂರಿಗೆ ತೆರಳುವಾಗ ಮಾರ್ಗ ಮಧ್ಯ ಘಟನೆ ನಡೆದಿದೆ ಎನ್ನಲಾಗಿದೆ. ಈ ಕುರಿತು ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.