ಪ್ರಮುಖ ಸುದ್ದಿ
ಯಾದಗಿರಿಃ ಸಕಾಲಕ್ಕೆ ಚಿಕಿತ್ಸೆ ಸಿಗದೆ ನವಜಾತು ಶಿಶು ಸಾವು-ಆಕ್ರೋಶ
ಯಾದಗಿರಿಃ ಸಕಾಲಕ್ಕೆ ಚಿಕಿತ್ಸೆ ಸಿಗದೆ ನವಜಾತ ಶಿಶು ಸಾವು
ಯಾದಗಿರಿಃ ಸಕಾಲಕ್ಕೆ ಚಿಕಿತ್ಸೆ ಸಿಗದೆ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಟಿದ್ದು ಜನರ ಆಕ್ರೋಶಕ್ಕೆ ಕಾರಣವಾದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಚಾಮನಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಸುರಪುರ ತಾಲೂಕಿನ ಏವೂರ ತಾಂಡದ ಕಾಜಲ್ ಮಗುವಿನ ತಾಯಿಯಾಗಿದ್ದು,
ಸಂಜೆ ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬಂದಿದ್ದ ಮಹಿಳೆ ಕಾಜಲ್ ಮಗುವಿಗೆ ಜನ್ಮ ನೀಡಿದ್ದಾಳೆ.
ಹೆರಿಗೆ ಆದ ಬಳಿಕ ನವಜಾತ ಶಿಶುವಿಗೆ ನೋಡಬೇಕಾದ ವೈದ್ಯರಾರು ಇಲ್ಲದ ಕಾರಣ ಸೂಕ್ತ ಚಿಕಿತ್ಸೆ ಸಿಗದ ಹಿನ್ನೆಲೆ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.
ಹೆರಿಗೆ ಆದ ಕೇವಲ 10 ನಿಮಿಷದಲ್ಲೇ ಮಗು ಸಾವನ್ನಪ್ಪಿದೆ ಮಗು ರಕ್ಷಣೆಗೆ ಯಾರೊಬ್ಬ ವೈದ್ಯರು ಆಸ್ಪತ್ರೆಯಲ್ಲಿರಲಿಲ್ಲ ಎನ್ನಲಾಗಿದೆ.
ಹೀಗಾಗಿ ಆಸ್ಪತ್ರೆ ಮುಂದೆ ಸಂಬಂಧಿಕರು, ನಾಗರಿಕರು ಜಮಾವಣೆಗೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಆರು ತಿಂಗಳಿಂದ ಆಸ್ಪತ್ರೆಗೆ ವೈದ್ಯರಿಲ್ಲದೆ ಜನ ಬೇಸತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.