ನಕಲಿ ಡಾಕ್ಟರೇಟ್ ಪದವಿ ಪ್ರದಾನ ಕಾರ್ಯಕ್ರಮದ ಮೇಲೆ ಪೊಲೀಸರ ದಾಳಿ, ಆಯೋಜಕರು ಪರಾರಿ
ನಕಲಿ ಡಾಕ್ಟರೇಟ್ ಪದವಿ ಪ್ರದಾನ ಕಾರ್ಯಕ್ರಮದ ಮೇಲೆ ಪೊಲೀಸರ ದಾಳಿ, ಆಯೋಜಕರು ಪರಾರಿ
ಮೈಸೂರಃ ನಗರದ ಖಾಸಗಿ ಹೊಟೇಲ್ವೊಂದರಲ್ಲಿ ನಕಲಿ ವಿಶ್ವವಿದ್ಯಾಲಯ ಹೆಸರಿನಲ್ಲಿ ಡಾಕ್ಟರೇಟ್ ಪದವಿ ಪ್ರದಾನ ದಂದೆ ನಡೆಯುತ್ತಿರುವ ಮಾಹಿತಿ ಮೇರೆಗೆ ಡಿಸಿಪಿ ಪ್ರಕಾಶಗೌಡ ನೆತೃತ್ವದಲ್ಲಿ ದಾಳಿ ನಡೆದಿದ್ದು ಮೂವರು ಆಯೋಜಕರನ್ನು ವಶಕ್ಕೆ ಪಡೆದಿದ್ದು, ಉಳಿದ ಕಾರ್ಯಕ್ರಮದ ಆಯೋಜಕರು ಪರಾರಿಯಾದ ಘಟನೆ ನಡೆದಿದೆ.
ಈ ನಕಲಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಹರಿಹರ ಶಾಸಕ ರಾಮಪ್ಪ ಭಾಗಿಯಾಗಿದ್ದರು. ಆದರೆ ಕಾರ್ಯಕ್ರಮ ಮೊದಲೇ ಡಿಸಿಪಿ ಪ್ರಕಾಶ್ ಗೌಡ ಅವರು, ನಕಲಿ ಕಾರ್ಯಕ್ರಮ ಕುರಿತು ಶಾಸಕರಿಗೆ ಮನವರಿಕೆ ಮಾಡಿದ್ದರು ಎನ್ನಲಾಗಿದೆ.
ಇಂಟರ್ ನ್ಯಾಷನಲ್ ಗ್ಲೋಬಲ್ ಪೀಸ್ ವಿ.ವಿ.ಹೆಸರಲ್ಲಿ ನಕಲಿ ಡಾಕ್ಟರೇಟ್ ಪದವಿ ಪ್ರಧಾನ ಕಾರ್ಯಕ್ರಮದಲ್ಲಿ 150 ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಡಾಕ್ಟರೇಟ್ ಪದವಿ ನೀಡಲು ವಿತರಣೆ ಮಾಡಲಾಗುತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ವೇಳೆ ಕಾರ್ಯಕ್ರಮದ ಪ್ರಶಸ್ತಿ ಪತ್ರ, ಫಲಕಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನುಳಿದ ಆಯೋಜಕರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದು, ರಾಜ್ಯದಾದ್ಯಂತ ದುಡ್ಡು ಪಡೆದು ಸಿಕ್ಕವರಿಗೆ ಡಾಕ್ಟರೇಟ್ ಪದವಿ ನೀಡಿ ಹಣ ಗಳಿಸುವ ನಕಲಿ ವಿಶ್ವವಿದ್ಯಾಲಯ ಹೆಸರಿನ ದಂಧೆಕೋರರಿವರಾಗಿದ್ದು, ವಿಜಯನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.