Homeಜನಮನಪ್ರಮುಖ ಸುದ್ದಿ

ಮುಡಾ ಹಗರಣ ಕೇಸ್: ದೂರು ನೀಡಿ 6 ದಿನ ಕಳೆದರೂ ಕ್ರಮ ಏಕೆ ಕೈಗೊಂಡಿಲ್ಲ?- ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಕಾಂಗ್ರೆಸ್ ನಾಯಕ ಎಂ. ಲಕ್ಷ್ಮಣ ಅವರ ವಿರುದ್ಧ ದೂರು ನೀಡಿ 6 ದಿನ ಕಳೆದರೂ ಇನ್ನೂ ಕ್ರಮ ಏಕೆ ಕೈಗೊಂಡಿಲ್ಲ ಎಂದು ಪ್ರಶ್ನಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ದೂರು ನೀಡಿ ಆರು ದಿನವಾದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮಂಗಳವಾರ ಮೈಸೂರಿಗೆ ಬರುತ್ತಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರ ಪತ್ನಿಯನ್ನು ವಿಚಾರಣೆಗೆ ಒಳಪಡಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪತ್ರದ ಮೂಲಕ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ಹೆಂಡತಿ ಪಾರ್ವತಿ ಮತ್ತು ಲಕ್ಷ್ಮಣ್‌ರವರ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರರ್ಜಿ ನೀಡಿರುವುದು ನಿಮಗೆ ತಿಳಿದ ವಿಷಯ. ದೂರರ್ಜಿ ನೀಡಿ ಆರು ದಿನಗಳಾಗುತ್ತಾ ಬಂದಿದ್ದರೂ ಗಂಭೀರವಾಗಿ ಪರಿಗಣಿಸಿದಂತೆ ಕಂಡು ಬಂದಿರುವುದಿಲ್ಲ. ನಿನ್ನೆ ರಾತ್ರಿ ಪಾರ್ವತಿರವರು ಮೈಸೂರಿಗೆ ಬಂದಿದ್ದು, ಇಂದು ಬೆಳಗ್ಗೆ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಲಿದ್ದಾರೆ ಎಂಬುದು ತಿಳಿದುಬಂದಿದೆ. ಆದ್ದರಿಂದ ಆರೋಪಿತರಾದ ಪಾರ್ವತಿರವರನ್ನು ಈ ದಿನ ತಾವೇ ಖುದ್ದಾಗಿ ನನ್ನ ಆರೋಪಕ್ಕೆ ಪೂರಕವಾಗಿ ವಿಚಾರಣೆಗೆ ಒಳಪಡಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಪೊಲೀಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಏಕೆಂದರೆ ಪಾರ್ವತಿರವರು ಮುಖ್ಯಮಂತ್ರಿಗಳ ಹೆಂಡತಿಯಾಗಿರುವುದರಿಂದ ಅವರನ್ನು ವಿಚಾರಣೆಗೆ ಒಳಪಡಿಸಲು ಪೊಲೀಸ್ ನಿರೀಕ್ಷಕರು ಮತ್ತು ಸಹಾಯಕ ಪೊಲೀಸ್ ಆಯುಕ್ತರು ಹಿಂಜರಿಯುವ ಸಾಧ್ಯತೆ ಇರುವುದರಿಂದ ತಾವೇ ವಿಚಾರಣೆ ನಡೆಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಮನವಿಮಾಡಿಕೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button