Homeಜನಮನಪ್ರಮುಖ ಸುದ್ದಿ

ಮೀನುಗಾರಿಕೆ ಆರೋಪ: ತಮಿಳುನಾಡಿನ 8 ಮೀನುಗಾರನ್ನು ಬಂಧಿಸಿದ ಶ್ರೀಲಂಕಾ ನೌಕಪಡೆ

ರಾಮೇಶ್ವರಂ: ಡೆಲ್ಫ್ಟ್ ದ್ವೀಪದಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಶ್ರೀಲಂಕಾ ನೌಕಾಪಡೆ ಸೋಮವಾರ ತಮಿಳುನಾಡಿನ 8 ಮಂದಿ ಮೀನುಗಾರನ್ನು ಬಂಧಿಸಿದ್ದಾರೆ.

ಮುಂಜಾನೆ ಧನುಷ್ಕೋ ಡಿ ಮತ್ತು ತಲೈಮನ್ನಾರ್ ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಸ್ತು ತಿರುಗುತ್ತಿದ್ದ ಶ್ರೀಲಂಕಾ ನೌಕಾಪಡೆ ಗಡಿ ಮೀರಿ ಮೀನುಗಾರಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ನಾಡದೋಣಿ ಸಹಿತ 8 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದೆ.

ಘಟನೆ ಕುರಿತು ಹೇಳಿಕೆ ನೀಡಿರುವ ರಾಮೇಶ್ವರಂ ಮೀನುಗಾರಿಕೆ ಸಹಾಯಕ ನಿರ್ದೇಶಕ, ರಾಮೇಶ್ವರಂನಿಂದ 430 ಯಾಂತ್ರೀ ಕೃತ ದೋಣಿಗಳು ಸೋಮವಾರ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಿತ್ತು. ಈ ವೇಳೆ ಗಡಿ ದಾಟಿದ ಆರೋಪ ಹೊರಿಸಿ ಲಂಕಾ ನೌಕಾಪಡೆ 8 ಮೀನುಗಾರರನ್ನು ಬೋಟ್ ಸಹಿತ ಬಂಧಿಸಿದೆ. ಕೂಡಲೇ ಕೇಂದ್ರ ಮಧ್ಯಸ್ಥಿಕೆ ವಹಿಸಿ ಮೀನುಗಾರರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದೆ.

Related Articles

Leave a Reply

Your email address will not be published. Required fields are marked *

Back to top button