ಬಸವಭಕ್ತಿ
vinayavani ವಚನ ಸಿಂಚನ : ಕುಲವೆಂದು ಹೋರಾಡುವ ಅಣ್ಣಗಳಿರಾ, ಕೇಳಿರೊ…
ಕುಲವೆಂದು ಹೋರಾಡುವ ಅಣ್ಣಗಳಿರಾ, ಕೇಳಿರೊ:
ಕುಲವೇ ಡೋಹರನ? ಕುಲವೇ ಮಾದಾರನ?
ಕುಲವೇ ದೂರ್ವಾಸನ?
ಕುಲವೇ ವ್ಯಾಸನ? ಕುಲವೇ ವಾಲ್ಮೀಕನ? ಕುಲವೇ ಕೌಂಡಿಲ್ಯನ?
ಕುಲವ ನೋಳ್ಪಡೆ ಹುರುಳಿಲ್ಲ ;
ಅವರ ನಡೆಯ ನೋಳ್ಪಡೆ ನಡೆಯುವರು ತ್ರಿಲೋಕದಲ್ಲಿಲ್ಲ
ನೋಡಾ,
ಕಪಿಲಸಿದ್ಧಮಲ್ಲಿಕಾರ್ಜುನಾ.
-ಸಿದ್ಧರಾಮೇಶ್ವರ