ಪ್ರಮುಖ ಸುದ್ದಿ
ಸೆಲ್ಫಿ ವಿಡಿಯೋ ಮಾಡಿಟ್ಟು ಯುವ ಗುತ್ತಿಗೆದಾರ ಆತ್ಮಹತ್ಯೆ!
ರಾಯಚೂರು: ಮಸ್ಕಿ ತಾಲ್ಲೂಕಿನ ಗುಂಡೂರು ಸಮೀಪ ಹರಿಯುವ ತುಂಗಭದ್ರಾ ಕಾಲುವೆಗೆ ಬಿದ್ದು ಗುತ್ತಿಗೆದಾ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗುತ್ತಿಗೆದಾರ ವೀರ ಚನ್ನಬಸವ (35) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ ಚನ್ನಬಸವ 5 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದು ಸಾಲಬಾಧೆಯಿಂದಾಗಿ ಸಾವಿಗೆ ಶರಣಾಗುತ್ತಿರುವುದಾಗಿ ಹೇಳಿದ್ದಾರೆ. ಅಂತೆಯೇ ಕೂಲಿಕಾರರಿಗೆ ತಾವೂ ನೀಡಬೇಕಾದ ಹಣ, ತಮ್ಮ ಬಳಿ ಉಳಿದಿರುವ ಹಣದ ವಿವರವನ್ನೂ ಹೇಳಿದ್ದಾರೆ.
ವೀರ ಚನ್ನಬಸವ ಬಳಿ ಡೆತ್ ನೋಟ್ ಸಹ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಸಾಲಬಾಧೆ ಬಗ್ಗೆ ಗುತ್ತಿಗೆದಾರ ವೀರ ಚನ್ನಬಸವ ದಾಖಲಿಸಿದ್ದಾರೆ ಎನ್ನಲಾಗಿದೆ. ಮಸ್ಕಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ.