ಪ್ರಮುಖ ಸುದ್ದಿ

ಇವರೆಲ್ಲಾ ಜಿಲ್ಲಾ ಪಂಚಾಯತಿ ಕಚೇರಿ ಎದುರು ಬೊಬ್ಬೆ ಹಾಕಿದ್ದೇಕೆ ಗೊತ್ತಾ?

ಕಲಬುರಗಿ : ಜಿಲ್ಲಾ ಪಂಚಾಯತಿ ಸದಸ್ಯರು ಹಾಗೂ ಸಿಇಓ ನಡುವಿನ ಸಮರದಿಂದಾಗಿ ಸಾಮಾನ್ಯ ಸಭೆ ಮುಂದೂಡುತ್ತಿರುವುದನ್ನು ಖಂಡಿಸಿ ಸಿಪಿಐಎಮ್ ಸಂಘಟನೆಯ ಕಾರ್ಯಕರ್ತರು ಇಂದು ಧರಣಿ ನಡೆಸಿದ್ದಾರೆ. ಕಚೇರಿ ಎದುರು ಬಾಯಿ ಬಡಿದುಕೊಂಡು ವಿಭಿನ್ನವಾಗಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಜಿಲ್ಲೆಯ ಅಭಿವೃದ್ಧಿಯನ್ನು ಕಡೆಗಣಿಸಿ ಜಿಲ್ಲಾ ಪಂಚಾಯತಿ ಸದಸ್ಯರು ಮತ್ತು ಅಧಿಕಾರಿಗಳು ಒಣ ಪ್ರತಿಷ್ಠೆಯಲ್ಲಿ ತೊಡಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಜಿಲ್ಲೆಯಾದ್ಯಂತ ಕಳಪೆ ಗುಣಮಟ್ಟದ ಆಹಾರ ಧಾನ್ಯ ಪೂರೈಸಲಾಗುತ್ತಿದೆ. ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳ ಹುದ್ದೆಗಳೇ ಖಾಲಿ ಇವೆ. ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆಯಲ್ಲಿ ಹೆಳೋರು ಕೆಳೋರು ಇಲ್ಲಂತಾಗಿದೆ. ಆದರೆ, ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಬೇಕಿದ್ದ ಜಿಲ್ಲಾ ಪಂಚಾಯತಿ ಸದಸ್ಯರು ಮಾತ್ರ ಸಿಇಓ ವರ್ಗಾವಣೆಗೆ ಪಟ್ಟು ಹಿಡಿದಿದ್ದಾರೆ. ಪರಿಣಾಮ ಸಾಮಾನ್ಯ ಸಭೆಯೇ ನಡೆಯದೆ ಜಿಲ್ಲೆಯ ಜನರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button